ADVERTISEMENT

ಮೇಕೆದಾಟು ಪ್ರಸ್ತಾವಕ್ಕೆ ಒಪ್ಪಿಗೆ ಕೊಡಿ: ಜಾರಕಿಹೊಳಿ ಮನವಿ

ಕೇಂದ್ರ ಜಲಶಕ್ತಿ ಸಚಿವರ ಜೊತೆ ಮಾತುಕತೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 20:36 IST
Last Updated 15 ಜುಲೈ 2020, 20:36 IST
ರಮೇಶ ಜಾರಿಕಿಹೊಳಿ
ರಮೇಶ ಜಾರಿಕಿಹೊಳಿ   

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್ ಅವರನ್ನು ಭೇಟಿಯಾದ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಮೇಕೆದಾಟು ಯೋಜನೆಯ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸುವಂತೆ ಮನವಿ ಮಾಡಿದರು. ದೆಹಲಿಗೆ ತೆರಳಿದ್ದ ಅವರು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಸುರೇಶ ಅಂಗಡಿ ಅವರ ಜತೆ ಶೆಖಾವತ್ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಿದರು.

ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಒದಗಿಸಲು ಅನುಕೂಲವಾಗುವಂತೆ 4.75 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಬಳಕೆ ಮಾಡಿಕೊಳ್ಳುವ ಸದುದ್ದೇಶದಿಂದ ಮೇಕೆದಾಟು ಬಳಿ ಸಮಾನಾಂತರ ಅಣೆಕಟ್ಟು ನಿರ್ಮಿಸಲಾಗುತ್ತಿದೆ. ಯೋಜನೆಗೆ ಕೂಡಲೇ ಅನುಮೋದನೆ ಕೊಡಿಸುವಂತೆ ಶೆಖಾವತ್ ಅವರನ್ನು ಕೋರಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕೆ ಅವಶ್ಯವಿರುವ ಅಧಿಸೂಚನೆಯನ್ನು ಕೂಡಲೇ ಹೊರಡಿಸಬೇಕು ಹಾಗೂ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು ಎಂದೂ ಅವರು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.