ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿ.ಡಿ ಪ್ರಕರಣ ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿದೆ. ಇದರ ನಡುವೆ ಕಾಂಗ್ರೆಸ್–ಬಿಜೆಪಿ ಟ್ವೀಟ್ ಸಮರವೂ ಜೋರಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಶಿವಮೊಗ್ಗದಲ್ಲಿ ಹೆಗಲು ಮುಟ್ಟಿನೋಡಿಕೊಂಡದ್ದಕ್ಕೂ, ಈಗ ನಡೆಯುತ್ತಿರುವ ಘಟನೆಗಳಿಗೂ ಏನೋ ಸಂಬಂಧವಿದೆ. ನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು. ಸಿಕ್ಕಿ ಬೀಳುವ ಮುನ್ಸೂಚನೆ ಮೊದಲೇ ಗೊತ್ತಾಗಿದ್ದು ಹೇಗೆ? ಪ್ರಕರಣದಲ್ಲಿ ನಿಮ್ಮ ಪಾಲೂ ಇದೆ ಎಂಬುದು ಸಾಬೀತು ಆದಂತಲ್ಲವೇ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ... ಹೇಳಿಕೆ ದಾಖಲಿಸಲು ಅನುಮತಿ: ಸದ್ಯದಲ್ಲೇ ನ್ಯಾಯಾಲಯಕ್ಕೆ ಯುವತಿ ಹಾಜರು -ವಕೀಲ
‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮೇಲೆ ಸಂತ್ರಸ್ತೆಯ ಪೋಷಕರು ನೇರವಾದ ಆಪಾದನೆ ಮಾಡಿದ್ದಾರೆ. ಆದರೆ, ಡಿಕೆಶಿಯವರು ನನಗೂ ಇದಕ್ಕೂ ಸಂಬಂಧವಿಲ್ಲ. ನಾನು ಈಗ ಮಾತನಾಡುವುದಿಲ್ಲ ಎನ್ನುತ್ತಿದ್ದಾರೆ. ಇದೇ ಮಾತುಗಳು ಅಂದು ಸದನದಲ್ಲಿ ಸಿಡಿ ವಿಚಾರ ಪ್ರಸ್ತಾಪ ಮಾಡಿ ಅಮೂಲ್ಯ ಸಮಯವನ್ನು ಹಾಳು ಮಾಡುವಾಗ ನೆನಪಿರಲಿಲ್ಲವೇ?’ ಎಂದು ಬಿಜೆಪಿ ಮತ್ತೊಂದು ಟ್ವೀಟ್ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.