ಬೆಂಗಳೂರು: ಶಾಸಕರ ರಾಜೀನಾಮೆ ವಿಚಾರವಾಗಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ಶನಿವಾರ ಸುಪ್ರೀಂ ಕೋರ್ಟ್ಗೆ ವಿವರವಾದ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನೀಡಿದ ಸೂಚನೆಯಂತೆ ಅವರು ಈ ಕ್ರಮಕೈಗೊಂಡಿದ್ದಾರೆ. ಜುಲೈ 11ರ ಸಂಜೆ 6 ಗಂಟೆಯ ಒಳಗೆ ಸಭಾಧ್ಯಕ್ಷರ ಎದುರು ಹಾಜರಾಗಿ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿತ್ತು. ಅದರಂತೆ ಶಾಸಕರು ಬೆಂಗಳೂರಿಗೆ ಬಂದು ರಾಜೀನಾಮೆ ಸಲ್ಲಿಸಿದ್ದರು.
ಸಭಾಧ್ಯಕ್ಷರು, ರಾಜೀನಾಮೆ ಸಲ್ಲಿಕೆಯ ಶಾಸಕರ ವಿಚಾರಣೆಗಳನ್ನು ಸಂಪೂರ್ಣವಾಗಿ ವಿಡಿಯೊ ಚಿತ್ರಿಕರಣ ಮಾಡಿಸಿದ್ದರು. ಪ್ರಮಾಣ ಪತ್ರದ ಜತೆಗೆ ವಿಡಿಯ ತುಣುಕುಗಳನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದಾರೆ.
ಇದರಲ್ಲಿ ಶಾಸಕರ ರಾಜೀನಾಮೆ ವಿಚಾರ ಹಾಗೂ ಇಬ್ಬರು ಶಾಸಕರ ಅನರ್ಹತೆಗೆ ಸಂಬಂಧಿಸಿದ ವಿವರಣೆ ಇದೆ.
Karnataka Speaker Affidavit by Pruthvi Raj on Scribd
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.