ವಿಧಾನಸೌಧ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ.ಮಣಿವಣ್ಣನ್ ಅವರ ಬಳಿ ಇದ್ದ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್ ಅವರಿಗೆ ವಹಿಸಲಾಗಿದೆ.
ಎಂಎಸ್ಎಂಇ ನಿರ್ದೇಶಕ ನಿತೇಶ್ ಪಾಟೀಲ್ ಅವರನ್ನು ಮೈಸೂರು ಕಂದಾಯ ವಿಭಾಗದ ಪ್ರಾದೇಶಕ ಆಯುಕ್ತರಾಗಿ, ಆರ್.ರಾಮಚಂದ್ರನ್ ಅವರನ್ನು ಕರ್ನಾಟಕ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಬಿ.ಸಿ.ಸುರೇಶ್ ಅವರನ್ನು ಎಂಎಸ್ಎಂಇ ನಿರ್ದೇಶಕರಾಗಿ, ಎಂ.ಎಸ್.ದಿವಾಕರ ಅವರನ್ನು ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿರ್ವಾಹಣಾ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.