ADVERTISEMENT

ಐಎಎಸ್‌ ಅಧಿಕಾರಿಗಳ ವರ್ಗಾವಣೆ: ರಂಗಪ್ಪ ಬಿಬಿಎಂಪಿ ವಿಶೇಷ ಕಮಿಷನರ್‌

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 8:24 IST
Last Updated 3 ಮಾರ್ಚ್ 2022, 8:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಎಸ್. ಅವರನ್ನು ಬಿಬಿಎಂಪಿಯ ವಿಶೇಷ ಕಮಿಷನರ್‌(ಅಡ್ಮಿನ್‌) ಆಗಿ ವರ್ಗಾವಣೆ ಮಾಡಲಾಗಿದೆ.

ಮಡಿಕೇರಿ ಉಪ ವಿಭಾಗದ ಹಿರಿಯ ಸಹಾಯಕ ಕಮಿಷನರ್‌ ಈಶ್ವರ್‌ ಕುಮಾರ್‌ ಕಂಡೂ ಅವರನ್ನು ಬೆಂಗಳೂರಿನಲ್ಲಿ ಖಾಲಿಯಿರುವ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್‌ಆಗಿ ವರ್ಗಾವಣೆಯಾಗಿದ್ದಾರೆ.

ಕಲಬುರಗಿಯಲ್ಲಿ ಖಾಲಿಯಿದ್ದ ಸಾರ್ವಜನಿಕ ತಿಳುವಳಿಕೆ (ಪಬ್ಲಿಕ್‌ ಇನ್‌ಸ್ಟ್ರಕ್ಟರ್‌) ವಿಭಾಗದ ಹೆಚ್ಚುವರಿ ಕಮಿಷನರ್‌ ಹುದ್ದೆಗೆ ಗರಿಮಾ ಪನ್ವರ್‌ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರ್ಕಾರದ ಆದೇಶ ತಕ್ಷಣ ಜಾರಿಗೆ ಬರುವಂತೆ ಕಾರ್ಯದರ್ಶಿ ಸಂಜಯ್‌ ಬಿ.ಎಸ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.