ADVERTISEMENT

ಇಂದು ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2019, 19:50 IST
Last Updated 25 ಜುಲೈ 2019, 19:50 IST
ರನಿಲ್‌ ವಿಕ್ರಮಸಿಂಘೆ
ರನಿಲ್‌ ವಿಕ್ರಮಸಿಂಘೆ   

ಕುಂದಾಪುರ: ಇಲ್ಲಿಗೆ ಸಮೀಪದ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಶುಕ್ರವಾರ ಬೆಳಿಗ್ಗೆ ಶ್ರೀಲಂಕಾ ಪ್ರಧಾನ ಮಂತ್ರಿ ರನಿಲ್ ವಿಕ್ರಮಸಿಂಘೆ ಭೇಟಿ ನೀಡಿ ದರ್ಶನ ಪಡೆದುಕೊಳ್ಳಲಿದ್ದಾರೆ ಎಂದು ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಎಚ್‌. ಹಾಲಪ್ಪ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2.30ರವರೆಗೆ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.

ಶುಕ್ರವಾರ ದೇವಸ್ಥಾನದಲ್ಲಿ ಕ್ಷೇತ್ರದ ಹಿರಿಯ ಅರ್ಚಕ ಡಾ.ಎನ್‌.ನರಸಿಂಹ ಅಡಿಗ ಅವರ ನೇತೃತ್ವದಲ್ಲಿ ನಡೆಯುವ ನವ ಚಂಡಿಕಾ ಹೋಮದ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳಲಿರುವ ಅವರು ದೇವಿಯ ದರ್ಶನ ಪಡೆದು, ಹೋಮದ ಪ್ರಸಾದ ಸ್ವೀಕರಿಸಿ ತೆರಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.