ADVERTISEMENT

ಉದ್ಯಮಸ್ನೇಹಿ ರಾಜ್ಯ: ‘ಕರ್ನಾಟಕದ ಶ್ರೇಯಾಂಕ ಕುಸಿಯಲು ಹಿಂದಿನ ಸರ್ಕಾರಗಳೇ ಕಾರಣ’

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 9:41 IST
Last Updated 6 ಸೆಪ್ಟೆಂಬರ್ 2020, 9:41 IST
   

ಬೆಂಗಳೂರು: ಕರ್ನಾಟಕವುಉದ್ಯಮಸ್ನೇಹಿ ರಾಜ್ಯಗಳ ಶ್ರೇಯಾಂಕದಲ್ಲಿ ಕುಸಿತ ಕಾಣಲು ಹಿಂದಿನ ಸರ್ಕಾರಗಳ ವೈಫಲ್ಯವೇ ಕಾರಣ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ನೆರೆ ಹಾಗೂ ಕೊರೊನಾ ಪರಿಸ್ಥಿತಿ ಇದ್ದರೂಅಭಿವೃದ್ಧಿ ಕಾರ್ಯಗಳಿಗೆಹಿನ್ನಡೆಯಾಗದಂತೆ ನೋಡಿಕೊಂಡಿದೆ ಎಂದು ಟ್ವಿಟರ್‌ ಮೂಲಕ ತಿಳಿಸಿದ್ದಾರೆ. ಮುಂದುವರಿದು, ರೈತರ ಬದುಕನ್ನು ಹಸನಾಗಿಸುವುದು ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವುದರ ಉದ್ದೇಶವಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT