ADVERTISEMENT

ಹೃದಯಾಘಾತಕ್ಕೆ ಮಾಜಿ ಶಾಸಕ ರತನ್‌ ಸಿಂಗ್‌ ನಿಧನ

ಅರಣ್ಯ ಖಾತೆ ಸಚಿವ ಆನಂದ್‌ ಸಿಂಗ್‌ ದೊಡ್ಡಪ್ಪನ ಮಗ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 19:45 IST
Last Updated 24 ಮಾರ್ಚ್ 2020, 19:45 IST
ರತನ್‌ ಸಿಂಗ್‌
ರತನ್‌ ಸಿಂಗ್‌   

ಹೊಸಪೇಟೆ: ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರ ದೊಡ್ಡಪ್ಪನ ಮಗ, ಮಾಜಿ ಶಾಸಕ ರತನ್‌ ಸಿಂಗ್‌ (61) ಮಂಗಳವಾರ ಸಂಜೆ ಇಲ್ಲಿ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಪತ್ನಿ, ಮಗಳಿದ್ದಾಳೆ. ಮನೆಯಲ್ಲಿದ್ದಾಗಲೇ ಹೃದಯಾಘಾತವಾಗಿ ಅಲ್ಲೇ ಕೊನೆಯುಸಿರೆಳೆದಿದ್ದಾರೆ. ಬುಧವಾರ (ಮಾ.25) ನಗರದ ರಾಣಿಪೇಟೆಯಲ್ಲಿ ರಜಪೂತ ಸಮಾಜದ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

1991ರ ವಿಜಯನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದರು. ಅದಕ್ಕೂ ಮುನ್ನ ನಗರಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದರು. ಇವರ ತಂದೆ ಸತ್ಯನಾರಾಯಣ ಸಿಂಗ್‌ ವಿಜಯನಗರ ಕ್ಷೇತ್ರದಿಂದಲೇ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದರು.

ADVERTISEMENT

ಸಚಿವ ಆನಂದ್‌ ಸಿಂಗ್‌ ಅವರ ಅನುಪಸ್ಥಿತಿಯಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಗಳಿಗೆ ಅವರೇ ಹಾಜರಾಗುತ್ತಿದ್ದರು. ಮೃದು. ಮಿತ ಭಾಷಿ ರತನ್‌ ಸಿಂಗ್‌, ಎಲ್ಲ ಸಮಾಜದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.