ಬೆಂಗಳೂರು: ಕೋವಿಡ್–19 ಲಾಕ್ಡೌನ್ ಹಿನ್ನೆಲೆಯಲ್ಲಿ ಕಡು ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಈಗಾಗಲೇ ಮೂರು ತಿಂಗಳ ಪಡಿತರ ವಿತರಿಸಿರುವ ರಾಜ್ಯ ಸರ್ಕಾರ ಮುಂದಿನ ಎರಡು ತಿಂಗಳ ಅವಧಿಗೆ ಪಡಿತರ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಮೇ ಮೊದಲ ವಾರದಲ್ಲಿ ಜೂನ್ ಮತ್ತು ಜುಲೈ ತಿಂಗಳ ಪಡಿತರ ವಿತರಣೆಯ ಅಧಿಕೃತ ಅದೇಶ ಹೊರಬೀಳಲಿದೆ ಎಂದು
ಸರ್ಕಾರದ ಮೂಲಗಳು ‘ಪ್ರಜಾವಾಣಿ’ಗೆ ಖಚಿತ ಪಡಿಸಿವೆ.
ಲಾಕ್ಡೌನ್ ಬಳಿಕ ಮೂರು ತಿಂಗಳ ಪಡಿತರವನ್ನು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ದಾರರ ಪೈಕಿ ಶೇ 94 ರಷ್ಟು ಜನರಿಗೆ ವಿತರಿಸಲಾಗಿದೆ. ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದವರಿಗೂ ಮೂರು ತಿಂಗಳ ಅವಧಿಗೆ ತಿಂಗಳಿಗೆ ತಲಾ 10 ಕೆ.ಜಿ ಅಕ್ಕಿ, 1 ಕೆ.ಜಿ ತೊಗರಿ ಬೇಳೆ ವಿತರಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.