ADVERTISEMENT

ಬಿಜೆಪಿ ಅಭ್ಯರ್ಥಿಗಳ ಪರ ರತ್ನಪ್ರಭಾ ಪ್ರಚಾರ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 17:42 IST
Last Updated 8 ಏಪ್ರಿಲ್ 2019, 17:42 IST
ಯಡಿಯೂರಪ್ಪ ಅವರಿಗೆ ರತ್ನಪ್ರಭಾ ಹೂಗುಚ್ಛ ನೀಡಿದರು
ಯಡಿಯೂರಪ್ಪ ಅವರಿಗೆ ರತ್ನಪ್ರಭಾ ಹೂಗುಚ್ಛ ನೀಡಿದರು   

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ತಿಳಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಡಾಲರ್ಸ್‌ ಕಾಲೊನಿಯ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರತ್ನಪ್ರಭಾ ಅವರು ಕಳೆದ ವಾರ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅವರು ಗುಲ್ಬರ್ಗಾ, ರಾಯಚೂರು, ಬೆಂಗಳೂರು ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಭೇಟಿ ವೇಳೆ ಶಾಸಕ ಸಿ.ಎಂ. ಉದಾಸಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.