ಬೆಂಗಳೂರು: ಸೆನೆಗಲ್ನಲ್ಲಿ ಬಂಧಿಸಲಾದ ಗ್ಯಾಂಗ್ಸ್ಟರ್ ರವಿ ಪೂಜಾರಿಯನ್ನು ಭಾನುವಾರ ರಾತ್ರಿಯೇ ಬೆಂಗಳೂರಿಗೆ ಕರೆತಂದಿರುವ ಪೊಲೀಸರು, ತಿಲಕ್ ನಗರ ಕೊಲೆ ಪ್ರಕರಣದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಆತನನ್ನು ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ
ಜನವರಿಯಲ್ಲಿ ಬಂಧಿಸಲಾಗಿದ್ದ ರವಿ ಪೂಜಾರಿ ಸೆನೆಗಲ್ ಪೊಲೀಸರ ಕಸ್ಟಡಿಯಲ್ಲಿದ್ದ. ಭಾರತಕ್ಕೆ ಕಳುಹಿಸಬೇಡಿ ಎಂದು ಅಲ್ಲಿಯ ಸುಪ್ರಿಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಆ ಅರ್ಜಿಯನ್ನು 2020ರ ಫೆಬ್ರುವರಿ 19ರಂದು ನ್ಯಾಯಾಲಯ ತಿರಸ್ಕರಿಸಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.