ADVERTISEMENT

ವಿಡಿಯೊ| ಶುದ್ಧ ಕುಡಿಯುವ ನೀರಿಗಾಗಿ ಸಗಣಿ ಎರಚಿಕೊಂಡು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2019, 9:23 IST
Last Updated 21 ನವೆಂಬರ್ 2019, 9:23 IST
ಸೆಗಣಿ ಎರಚಿಕೊಂಡು ಪ್ರತಿಭಟನೆ
ಸೆಗಣಿ ಎರಚಿಕೊಂಡು ಪ್ರತಿಭಟನೆ   

ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಜನಶಕ್ತಿ ಕೇಂದ್ರದ ಕಾರ್ಯಕರ್ತರು ಮೈಮೇಲೆ ಸೆಗಣಿ ಎರಚಿಕೊಂಡು ಪ್ರತಿಭಟನೆ ನಡೆಸಿದರು.

ಶಾಶ್ವತ ಕುಡಿಯುವ ನೀರಿನ‌ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದು, ಶುದ್ಧ ಕುಡಿಯುವ ನೀರು ಪೂರೈಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜನಶಕ್ತಿ ಕೇಂದ್ರದ ಕಾರ್ಯಕರ್ತರು ಕಳೆದ 55 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದರು.

ಧರಣಿಗೆ ಸ್ಪಂದನೆ ಮಾಡದಿರುವುದಕ್ಕೆ ನೊಂದು ಕಾರ್ಯಕರ್ತರು ಮೈಮೇಲೆ ಸಗಣಿ ಎರಚಿಕೊಂಡು ಪ್ರತಿಭಟನೆ ಕೈಗೊಂಡಿದ್ದಾರೆ. ಮುಖಂಡರಾದ ಪ್ರಭುರಾಜ ಕೊಡ್ಲು, ಎಸ್.ಎಂ.ಶಾನವಾಜ್, ಹನುಮಂತ ಕೋಟೆ, ನುಸ್ರತ್, ಮೈನುದ್ದೀನ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಆನಂತರ ಪ್ರತಿಭಟನಾಕಾರರು ತಹಶಿಲ್ದಾರ್ ಅಮರೇಶ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.