ADVERTISEMENT

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ: ಆರ್‌ಸಿಬಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 10:54 IST
Last Updated 5 ಜೂನ್ 2025, 10:54 IST
RCB
RCB   

ಬೆಂಗಳೂರು: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಲಾಗುವುದು ಎಂದು ಆರ್‌ಸಿಬಿ ಮ್ಯಾನೆಜ್‌ಮೆಂಟ್‌ ಗುರುವಾರ ತಿಳಿಸಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಧಿಕೃತ ಪ್ರಕಟಣೆಯಲ್ಲಿ, ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದೆ.

ಇದರ ಜೊತೆಗೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳ ಚಿಕಿತ್ಸೆಗೆ ನೆರವಾಗಲು RCB ಕೇರ್ಸ್ ಎಂಬ ನಿಧಿಯನ್ನು ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದೆ. 

ADVERTISEMENT

ನಿನ್ನೆಯ ಘಟನೆ ನಮಗೆ ನೋವುಂಟ ಮಾಡಿದೆ, ನಾವು ಸಹ ದುಃಖದಲ್ಲಿ ಭಾಗಿಯಾಗಿದ್ದೇವೆ ಎಂದು ಆರ್‌ಸಿಬಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.