ADVERTISEMENT

ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 4:23 IST
Last Updated 22 ಡಿಸೆಂಬರ್ 2021, 4:23 IST
–ಶ್ರೀರಾಮುಲು, ಸಾರಿಗೆ ಸಚಿವ
–ಶ್ರೀರಾಮುಲು, ಸಾರಿಗೆ ಸಚಿವ   

ಬೆಂಗಳೂರು: ಮುಷ್ಕರದಲ್ಲಿ ಭಾಗಿಯಾದ ಕಾರಣಕ್ಕೆಸಾರಿಗೆ ಸಂಸ್ಥೆಗಳ ನೌಕರರು ವಜಾಗೊಂಡ ಪ್ರಕರಣಗಳನ್ನು ಲೋಕ್ ಅದಾಲತ್‌ ಮೂಲಕ ನಾಲ್ಕು ವಾರಗಳಲ್ಲಿ ಇತ್ಯರ್ಥಪಡಿಸಿ, ಅವರ ಪುನರ್ ನೇಮಕಕ್ಕೆನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ನಾಲ್ಕೂ ಸಾರಿಗೆ ನಿಗಮಗಳಿಗೆ ಸರ್ಕಾರ ನಿರ್ದೇಶನ ನೀಡಿದೆ.

ಆರನೇ ವೇತನ ಆಯೋಗದ ಶಿಫಾರಸುಗಳನ್ನು ಸಾರಿಗೆ ನೌಕರರಿಗೂ ಅನ್ವಯಿಸಬೇಕು ಎಂದು ಒತ್ತಾಯಿಸಿ 2021ರ ಏಪ್ರಿಲ್ 7ರಿಂದ 21ರವರೆಗೆ ನೌಕರರು ಮುಷ್ಕರ ನಡೆಸಿದ್ದರು. ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರನ್ನು ವಜಾಗೊಳಿಸಲಾಗಿತ್ತು. ಅವರಲ್ಲಿ ‌1,351 ನೌಕರರ ಮರು ನೇಮಕ ವಿಷಯ ಇತ್ಯರ್ಥಪಡಿಸುವಂತೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆಸಾರಿಗೆ ಇಲಾಖೆ ಸೂಚನೆ ನೀಡಿದೆ.

*
ಸಾರಿಗೆ ಸಿಬ್ಬಂದಿಯನ್ನು ಎಂಟು ತಿಂಗಳ ಹಿಂದೆ ವಜಾಗೊಳಿಸಲಾಗಿತ್ತು. ಈಗ ಅವರನ್ನು ಮಾನವೀಯತೆ ದೃಷ್ಟಿಯಿಂದ ಸೇವೆಗೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ.
–ಶ್ರೀರಾಮುಲು, ಸಾರಿಗೆ ಸಚಿವ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.