ADVERTISEMENT

ಸರ್ಕಾರ ನೆರವು ನೀಡಿದರೆ ಸಾರಿಗೆ ಸೇವೆ ಒದಗಿಸಲು ಸಿದ್ಧ: ಖಾಸಗಿ ಬಸ್‌ ಮಾಲೀಕರ ಸಂಘ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 3:11 IST
Last Updated 14 ಡಿಸೆಂಬರ್ 2020, 3:11 IST
ಬೆಂಗಳೂರಿನಲ್ಲಿ ಸರ್ಕಾರಿ ಬಸ್ಸುಗಳು ರಸ್ತೆಗಿಳಿಯದ ಕಾರಣ ಜನರು ಊರುಗಳಿಗೆ ತೆರಳಲು ಕಲಸಿಪಾಳ್ಯ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳನ್ನು ಹುಡುಕುತ್ತಿರುವುದು
ಬೆಂಗಳೂರಿನಲ್ಲಿ ಸರ್ಕಾರಿ ಬಸ್ಸುಗಳು ರಸ್ತೆಗಿಳಿಯದ ಕಾರಣ ಜನರು ಊರುಗಳಿಗೆ ತೆರಳಲು ಕಲಸಿಪಾಳ್ಯ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳನ್ನು ಹುಡುಕುತ್ತಿರುವುದು    

ಬೆಂಗಳೂರು: ಸರ್ಕಾರ ಅಗತ್ಯ ನೆರವು ನೀಡಿದಲ್ಲಿ ರಾಜ್ಯದಾದ್ಯಂತ ಬಸ್‌ ಓಡಿಸಲು ಸಿದ್ಧವಿರುವುದಾಗಿ ರಾಜ್ಯ ಖಾಸಗಿ ಬಸ್‌ಗಳ ಮಾಲೀಕರ ಸಂಘ ಹೇಳಿದೆ.

‘ಸಾರ್ವಜನಿಕರಿಗೆ ತೊಂದರೆ ಆಗದಂತೆ ತಡೆಯಲು ಸೇವೆ ಒದಗಿಸುವುದಕ್ಕೆ ನಾವು ಸಿದ್ಧರಿದ್ದೇವೆ. ಸರ್ಕಾರ ಅಗತ್ಯ ನೆರವು ಒದಗಿಸಬೇಕು. ಎಲ್ಲ ಕಡೆಗಳಲ್ಲೂ ಬಸ್‌ಗಳನ್ನು ಓಡಿಸಲಾಗುವುದು’ ಎಂದು ರಾಜ್ಯ ಖಾಸಗಿ ಬಸ್‌ಗಳ ಮಾಲೀಕರ ಸಂಘದ ಅಧ್ಯಕ್ಷ ಕೆ.ಟಿ. ರಾಜಶೇಖರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT