ADVERTISEMENT

ಸಿಇಟಿ ನಡೆಸಲು ಸಿದ್ಧ: ಡಿಸಿಎಂ ಡಾ.ಸಿ.ಎನ್‌. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 21:08 IST
Last Updated 28 ಜುಲೈ 2020, 21:08 IST
ಡಾ.ಸಿ.ಎನ್‌. ಅಶ್ವತ್ಥನಾರಾಯಣ
ಡಾ.ಸಿ.ಎನ್‌. ಅಶ್ವತ್ಥನಾರಾಯಣ   

ಬೆಂಗಳೂರು: ಜುಲೈ 30 ಮತ್ತು 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸಿದ್ಧ ಇರುವುದಾಗಿ ಹೈಕೋರ್ಟ್‌ಗೆ ತಿಳಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಹೈಕೋರ್ಟ್‌ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಆರೋಗ್ಯ, ಸಾರಿಗೆ, ಪೊಲೀಸ್ ಅಧಿಕಾರಿಗಳ ಜತೆಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತುರ್ತು ವಿಡಿಯೊ ಸಂವಾದ ನಡೆಸಿದರು.

‘ಸಿದ್ಧತೆ ಪರಿಶೀಲಿಸಲಾಗಿದೆ. ಬುಧವಾರ ಈ ವಿಷಯವನ್ನು ಹೈಕೋರ್ಟ್ ಗಮನಕ್ಕೆ ತರಲಾಗುವುದು. ಅಂತಿಮವಾಗಿ ಹೈಕೋರ್ಟ್ ಸೂಚನೆ ಪ್ರಕಾರ ಮುಂದುವರಿಯಲಾಗುವುದು’ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.