ಶಹಾಪುರ (ಯಾದಗಿರಿ ಜಿಲ್ಲೆ): ‘ದಿ.ಸುರೇಶ ಅಂಗಡಿನಿಧನದಿಂದ ತೆರವಾದಬೆಳಗಾವಿ ಲೋಕಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಸ್ಫರ್ಧಿಸಲು ಸಿದ್ಧ. ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಮುಂದೇನಾಗುವುದು ಕಾದು ನೋಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.
ತಾಲ್ಲೂಕಿನ ಭೀಮರಾಯನಗುಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ರೈತರ ಹೋರಾಟಕ್ಕೆ ನಮ್ಮ ಪಕ್ಷದ ಬೆಂಬಲ ಸದಾ ಇದೆ. ಕೃಷಿ ಸಚಿವಬಿ.ಸಿ.ಪಾಟೀಲ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಉಡಾಫೆ ಹೇಳಿಕೆ ನೀಡುವುದು ಸರಿಯಲ್ಲ. ಆಡಳಿತ ನಡೆಸುವುದರಲ್ಲಿ ಬಿಜೆಪಿ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ’ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.