ADVERTISEMENT

‘ರೆಡ್ಡಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಿ’

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2019, 17:20 IST
Last Updated 24 ಆಗಸ್ಟ್ 2019, 17:20 IST

ಬೆಂಗಳೂರು: ‘ಸಚಿವ ಸಂಪುಟದಲ್ಲಿ ಕರ್ನಾಟಕ ರೆಡ್ಡಿ ಸಮದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದು ನೋವಿನ ಸಂಗತಿ. ಇದನ್ನು ಸಮುದಾಯ ತೀವ್ರವಾಗಿ ಖಂಡಿಸುತ್ತದೆ’ ಎಂದು ಕರ್ನಾಟಕ ರೆಡ್ಡಿಜನ ಸಂಘದ ಅಧ್ಯಕ್ಷ ವಿಜಯ ರಾಘವ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೆಡ್ಡಿ ಸಮುದಾಯಕ್ಕೆ ಸೇರಿದ 20 ಮಂದಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಪಕ್ಷಗಳಿಂದ ಚುನಾಯಿತರಾಗಿದ್ದಾರೆ. ಬಿಜೆಪಿಯಿಂದ 9 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಪ್ರತಿಭಟಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT