ಸಿಂಧನೂರು (ರಾಯಚೂರು ಜಿಲ್ಲೆ): ‘ಅಕ್ರಮವಾಗಿ ಸಂಪಾದಿಸಿದ ದುಡ್ಡು ಜಾಸ್ತಿ ಇರುವುದರಿಂದ ಜಿ. ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿರಬಹುದು. ಆದರೆ, ಯಾರೇ ಹೊಸ ಪಕ್ಷ ಕಟ್ಟಿದರೂ ಹೆಚ್ಚು ದಿನ ಇರಲ್ಲ. ಪಕ್ಷ ಸಂಘಟಿಸುವುದು ಕಷ್ಟ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಎಸ್. ಬಂಗಾರಪ್ಪ, ವಿಜಯ ಸಂಕೇಶ್ವರ, ಶ್ರೀರಾಮುಲು, ಯಡಿಯೂರಪ್ಪ ಕಟ್ಟಿದ ಪಕ್ಷಗಳು ಈಗ ಉಳಿದಿವೆಯೇ?’ ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.