ADVERTISEMENT

ಬೀದರ್‌ | ಆಧುನಿಕ ಅನುಭವ ಮಂಟಪಕ್ಕೆ ₹50 ಕೋಟಿ ಬಿಡುಗಡೆ: ಸಚಿವ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2024, 13:42 IST
Last Updated 8 ಫೆಬ್ರುವರಿ 2024, 13:42 IST
<div class="paragraphs"><p>ಸಚಿವ ಈಶ್ವರ ಬಿ. ಖಂಡ್ರೆ</p></div>

ಸಚಿವ ಈಶ್ವರ ಬಿ. ಖಂಡ್ರೆ

   

ಬೀದರ್‌: ‘ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಧುನಿಕ ಅನುಭವ ಮಂಟಪಕ್ಕೆ ₹50 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಅನುಭವ ಮಂಟಪ ಕಾಮಗಾರಿಗೆ ಮಾರ್ಚ್‌ವರೆಗಿನ ಬಿಲ್ ಪಾವತಿ ಮಾಡಲು ಹಾಗೂ ಕಾಮಗಾರಿಗೆ ತ್ವರಿತ ಚಾಲನೆ ನೀಡಲು ₹50 ಕೋಟಿ ಬಿಡುಗಡೆ ಮಾಡುವಂತೆ ನಾನು ಮಾಡಿದ್ದ ಮನವಿಗೆ ಸ್ಪಂದಿಸಿ ತಕ್ಷಣವೇ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವ ಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಿಸಬೇಕೆಂದು 2017ರಲ್ಲಿ ಪೌರಾಡಳಿತ ಸಚಿವನಿದ್ದಾಗ ನಾನು ಮಾಡಿದ್ದ ಮನವಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಅನುಮೋದನೆ ನೀಡಿ ಬಜೆಟ್‌ನಲ್ಲಿ ಪ್ರಕಟಿಸಿದ್ದರು ಎಂದು ಹೇಳಿದ್ದಾರೆ.

ಅನುಭವ ಮಂಟಪ ನಿರ್ಮಿಸುವುದು ನನ್ನ ಕನಸಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಭವ್ಯ, ದಿವ್ಯ ಅನುಭವ ಮಂಟಪ ನಿರ್ಮಾಣ ಮಾಡಿ ಬಸವಕಲ್ಯಾಣವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.