ADVERTISEMENT

ಬೆಂಗಳೂರಿನ ಎನ್‌ಐಎ ಕಚೇರಿ ಮೇಲ್ದರ್ಜೆಗೇರಿಸಿ: ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 21:30 IST
Last Updated 2 ಆಗಸ್ಟ್ 2022, 21:30 IST
   

ನವದೆಹಲಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ತಂಡದ (ಎನ್‌ಐಎ) ಕಚೇರಿಯನ್ನು ಮೇಲ್ದರ್ಜೆಗೆ ಏರಿಸಿ ಅದರ ವ್ಯಾಪ್ತಿಯನ್ನು ಹಿಗ್ಗಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿಮಂಗಳವಾರ ಭೇಟಿ ಮಾಡಿ ಸಮಾ ಲೋಚನೆ ನಡೆಸಿದ ಅವರು, ‘ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಯನ್ನು ತೀವ್ರಗೊಳಿಸಬೇಕು’ ಎಂದರು.

‘ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಶಿವಮೊಗ್ಲದಲ್ಲಿ ಹಿಂದೂ ಕಾರ್ಯಕರ್ತರನ್ನು ಒಂದೇ ಮಾದರಿಯಲ್ಲಿ ಕೊಲೆ ಮಾಡಲಾಗಿದೆ. ಕೇರಳ ಮಾದರಿಯಲ್ಲಿ ಕೊಲೆಗಳು ನಡೆಯುತ್ತಿವೆ. ಇದು ಕಳವಳಕಾರಿ’ ಎಂದು ಶೋಭಾ ಹೇಳಿದರು.

ADVERTISEMENT

‘ಕೊಲೆ ಆರೋಪಿಗಳ ಹಿಂದೆ ಯಾರಿದ್ದಾರೆ, ಅವರಿಗೆ ಎಲ್ಲಿ ತರಬೇತಿ ನೀಡಲಾಗುತ್ತಿದೆ, ಈ ಕೃತ್ಯಗಳಿಗೆ ಹಣಕಾಸಿನ ನೆರವು ಎಲ್ಲಿಂದ ಸಿಗುತ್ತಿದೆ ಎಂಬುದನ್ನು ಪತ್ತೆ ಹಚ್ಚಿ ತೀವ್ರಗತಿಯಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರನ್ನು ಒತ್ತಾಯಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.