ಚಿಕ್ಕಮಗಳೂರು: ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಪ್ರಕರಣ ತನಿಖಾ ತಂಡವು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ದೆಯ ವಿನಯ ಗುರೂಜಿ ಆಶ್ರಮದಲ್ಲಿ ಭಾನುವಾರ ಮಾಹಿತಿ ಕಲೆ ಹಾಕಿದೆ.
ಚನ್ನಗಿರಿ ಠಾಣೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಚಂದ್ರಶೇಖರ್ ಅವರು ಗೌರಿಗದ್ದೆಗೆ ಬಂದುಹೋಗಿದ್ದ ಕುರಿತು ವಿವರ ಪಡೆದಿದ್ದಾರೆ. ಸಿ.ಸಿ. ಟಿವಿ ಕ್ಯಾಮೆರಾ ಫೂಟೇಜ್ ಸಂಗ್ರಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.