
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ (ಸಂಗ್ರಹ ಚಿತ್ರ)
ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪರೇಡ್ ಆರಂಭಗೊಂಡಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಶುಭಾಶಯಗಳನ್ನು ಕೋರಿ ಪರೇಡ್ನಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿದರು.
ಪೊಲೀಸ್, ರಕ್ಷಣೆ, ವಿದ್ಯಾರ್ಥಿಗಳು. ಭಾರತ್ ಸ್ಕೌಟ್ಸ್, ಎನ್ಸಿಸಿ, ಎನ್ಎಸ್ಎಸ್, ರೆಡ್ ಕ್ರಾಸ್ ಸಹಿತ 30 ಕ್ಕೂ ತುಕಡಿಗಳಿಂದ ಗೌರವವನ್ನು ಪಡೆದರು.
ಒಟ್ಟು 1326 ಮಂದಿ ಪರೇಡ್ ನಲ್ಲಿ ಹೆಜ್ಜೆ ಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.