ಬೆಂಗಳೂರು:ಹಿಜಾಬ್ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತೀರ್ಪು ಟೀಕಿಸಿ ಮತ್ತು ವಿರೋಧಿಸಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯ ಅಡ್ವೊಕೇಟ್ ಜನರಲ್ಗೆ ಮನವಿ ಸಲ್ಲಿಸಲಾಗಿದೆ.
ಈ ಕುರಿತಂತೆಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸೋಮವಾರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರಿಗೆ ಅರ್ಜಿ ಸಲ್ಲಿಸಿ, ‘ಈ ಅರ್ಜಿಯಲ್ಲಿ ಕಾಣಿಸಲಾಗಿರುವ ಆರೋಪಿಗಳು, ನ್ಯಾಯಾಂಗ ಮತ್ತು ತೀರ್ಪನ್ನು ಟೀಕಿಸುತ್ತ ವೈಯಕ್ತಿಕ ಹೇಳಿಕೆ ನೀಡುತ್ತಿದ್ದಾರೆ. ನ್ಯಾಯಮೂರ್ತಿಗಳ ವಿಶ್ವಾಸಾರ್ಹತೆಯನ್ನೂ ಪ್ರಶ್ನಿಸುತ್ತಿದ್ದಾರೆ. ಈ ಮೂಲಕ ನ್ಯಾಯಾಂಗದ ಘನತೆಯನ್ನು ಕುಗ್ಗಿಸುವ ಯತ್ನ ಮಾಡುತ್ತಿದ್ದಾರೆ‘ ಎಂದು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.