
ಪ್ರಜಾವಾಣಿ ವಿಶೇಷಸಂವಿಧಾನದಡಿ ದೇಶದ ಜನರಿಗೆ ಸಂದಿರುವ ‘ಮೀಸಲಾತಿ’, ‘ಸಾಮಾಜಿಕ ನ್ಯಾಯ’ ಹಾಗೂ ‘ಶೋಷಿತರ ಹಕ್ಕು’ಗಳ ಬಗೆಗೆ ‘ಸಂವಿಧಾನವೇ ಬೆಳಕು’ ವಿಷಯದಡಿ ಕಲಬುರಗಿಯಲ್ಲಿ ಸಂವಾದ ನಡೆಯಿತು. ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಸಮೂಹವು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಈ ಸಂವಾದದಲ್ಲಿ, ಕಲಬುರಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ, ಕಲಬುರಗಿ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, ನಿವೃತ್ತ ಪ್ರಾಚಾರ್ಯ ನರೇಂದ್ರ ಬಡಶೇಷಿ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಪ್ಪಗೆರೆ ಸೋಮಶೇಖರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.