ADVERTISEMENT

ವಸತಿ ಶಾಲೆ: ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 17:38 IST
Last Updated 21 ಏಪ್ರಿಲ್ 2021, 17:38 IST

ಬೆಂಗಳೂರು: ನಗರದ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠ ನಡೆಸುವ ಶ್ರೀ ವೀರಭದ್ರಸ್ವಾಮಿ ಇಂಗ್ಲಿಷ್‌ ಮಾಧ್ಯಮ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಮುಂದೂಡಲಾಗಿದೆ.

ಇದೇ 25ರಂದು ಪರೀಕ್ಷೆ ನಿಗದಿಯಾಗಿತ್ತು. ಆದರೆ, ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮತ್ತು ಅದೇ ದಿನ ಸಂಪೂರ್ಣ ಬಂದ್‌ (ಕರ್ಫ್ಯೂ) ಇರುವುದರಿಂದ ಪರೀಕ್ಷೆ ಮುಂದೂಡಲಾಗಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಪರೀಕ್ಷೆಯ ದಿನಾಂಕ ಘೋಷಿಸಲಾಗುವುದು ಎಂದು ಮಠದ ಕಾರ್ಯದರ್ಶಿ ಸಿ. ಬಸವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

6ರಿಂದ 10ನೇ ತರಗತಿಗಳಿಗೆ ಇಂಗ್ಲಿಷ್‌ ಮಾಧ್ಯಮದಲ್ಲಿ ಅಧ್ಯಯನ ಮಾಡಬಯಸುವ ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶ ನೀಡಲಾಗುತ್ತದೆ. ಇದಕ್ಕಾಗಿ ಈ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ.

ADVERTISEMENT

ಮಾಹಿತಿಗೆ: 9448670372/ 9738245665.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.