ADVERTISEMENT

ಶಾಸಕರ ರಾಜೀನಾಮೆ | ಸ್ಪೀಕರ್ ವಿಚಾರಣೆಗೆ ರಾಮಲಿಂಗಾ ರೆಡ್ಡಿ, ಗೋಪಾಲಯ್ಯ ಗೈರು

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 12:06 IST
Last Updated 15 ಜುಲೈ 2019, 12:06 IST
   

ಬೆಂಗಳೂರು:ರಾಜೀನಾಮೆ ಸಲ್ಲಿಸಿರುವ ಅತೃಪ್ತ ಶಾಸಕರ ಪೈಕಿ ಇಬ್ಬರಾದ ರಾಮಲಿಂಗಾ ರೆಡ್ಡಿ ಮತ್ತು ಗೋಪಾಲಯ್ಯ ಅವರನ್ನು ಸೋಮವಾರ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ವಿಚಾರಣೆಗೆ ಕರೆದಿದ್ದರು. ಆದರೆ, ಅವರಿಬ್ಬರೂ ಹಾಜರಾಗಲಿಲ್ಲ.

ರಾಮಲಿಂಗಾ ರೆಡ್ಡಿ ಅವರು ಸ್ವತಃ ಸಭಾಧ್ಯಕ್ಷರಿಗೆ ಕರೆ ಮಾಡಿ ವಿಚಾರಣೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದರು. ಗೋಪಾಲಯ್ಯ ಅವರು ಸಚಿವಾಲಯ ಕಾರ್ಯದರ್ಶಿ ಅವರಿಗೆ ಕರೆ ಮಾಡಿ ತಾವು ಗೈರಾಗಲಿರುವ ವಿಷಯ ತಿಳಿಸಿದರು.

ರಾಮಲಿಂಗಾ ರೆಡ್ಡಿ ಅವರು ತಮ್ಮ ಅನುಕೂಲ ಸಮಯಕ್ಕೆ ಬರಬಹುದು ಎಂದು ಸಭಾಧ್ಯಕ್ಷರು ತಿಳಿಸಿದರು ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.

ADVERTISEMENT

ಮಂಗಳವಾರ ಅಥವಾ ಬುಧವಾರ ರೆಡ್ಡಿ ಅವರು ಸಭಾಧ್ಯಕ್ಷರ ಮುಂದೆ ಹಾಜರಾಗುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.