ADVERTISEMENT

ರಾಜ್ಯ ರಾಜಕೀಯ | ಗೋವಾ, ಮಹಾರಾಷ್ಟ್ರದ ರೆಸಾರ್ಟ್‌ನತ್ತ ರಾಜೀನಾಮೆ ನೀಡಿದ ಶಾಸಕರು

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 12:52 IST
Last Updated 6 ಜುಲೈ 2019, 12:52 IST
ರಾಜೀನಾಮೆ ನೀಡಿದ ಅತೃಪ್ತ ಶಾಸಕರು ಒಂದೆಡ ಇರುವುದು
ರಾಜೀನಾಮೆ ನೀಡಿದ ಅತೃಪ್ತ ಶಾಸಕರು ಒಂದೆಡ ಇರುವುದು   

ಬೆಂಗಳೂರು:ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು, ಇಂದು(ಶನಿವಾರ) ಸಂಜೆ ಗೋವಾ ಅಥವಾ ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ.

ಈಗಾಗಲೇ ವಿಮಾನನಿಲ್ದಾಣದ ಕಡೆ ಪ್ರಯಾಣ ಬೆಳೆಸಿದ್ದಾರೆ. ಕೆಂಪೇಗೌಡ ವಿಮಾನನಿಲ್ದಾಣದ ಮೂಲಕ ಬೇರೆ ರಾಜ್ಯಕ್ಕೆ ಪ್ರಯಾಣ ಮಾಡುವರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್‌ ನೇತೃತ್ವದಲ್ಲಿ ವಿಮಾನದಲ್ಲಿ ಸಂಜೆ ನೆರೆ ರಾಜ್ಯದ ಖಾಸಗಿ ರೆಸಾರ್ಟ್‌ಗೆ ಶಾಸಕರು ತೆರಳುವರು ಎಂದು ಮೂಲಗಳು ತಿಳಿಸಿವೆ.

ADVERTISEMENT

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.