ADVERTISEMENT

ನಿವೃತ್ತಿ ಉಪದಾನ 2006 ಏಪ್ರಿಲ್‌ 1 ರಿಂದಲೇ ಜಾರಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2022, 20:51 IST
Last Updated 19 ಅಕ್ಟೋಬರ್ 2022, 20:51 IST
   

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನ (ಡಿಸಿಆರ್‌ಜಿ) ಸೌಲಭ್ಯವನ್ನು 2006 ಏಪ್ರಿಲ್‌ 1ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಿ ರಾಜ್ಯ ಸರ್ಕಾರ ಬುಧವಾರ ಆದೇಶವನ್ನು ಹೊರಡಿಸಿದೆ.

2018ರ ಜೂನ್‌ 23ರಂದು ಹೊರಡಿದ್ದ ಆದೇಶದಲ್ಲಿ 2018ರ ಏಪ್ರಿಲ್‌ 1ರಿಂದ ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಆ ಆದೇಶವನ್ನು ಪರಿಷ್ಕರಿಸಲಾಗಿದೆ. ಇದೀಗ ‌2006ರಿಂದಲೇ ವಿಸ್ತರಿಸಿರುವ ಸೌಲಭ್ಯವನ್ನು ಇತ್ಯರ್ಥಪಡಿಸಲು ಪ್ರತ್ಯೇಕ ಮಾರ್ಗಸೂಚಿಯನ್ನೂ ಹೊರಡಿಸಲಾಗಿದೆ.

‘ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ನಿರಂತರ ಹೋರಾಟದ ಫಲವಾಗಿ ಸರ್ಕಾರ ಈ ಆದೇಶ ಹೊರಡಿಸಿದೆ. ಆದರೆ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ.

ADVERTISEMENT

ಡಿಸೆಂಬರ್‌ 19ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಡು ಇಲ್ಲವೆ ಮಡಿ ಅನಿರ್ದಿಷ್ಟವಾಧಿ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಶಾಂತರಾಮ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.