ADVERTISEMENT

130 ತಾಲ್ಲೂಕುಗಳಲ್ಲಿ ಅತಿವೃಷ್ಟಿ: ಆರ್.ಅಶೋಕ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 8:17 IST
Last Updated 16 ಸೆಪ್ಟೆಂಬರ್ 2020, 8:17 IST
ಕಂದಾಯ ಸಚಿವ ಆರ್. ಅಶೋಕ
ಕಂದಾಯ ಸಚಿವ ಆರ್. ಅಶೋಕ   

ಕಲಬುರ್ಗಿ:ಅತಿಯಾದ ಮಳೆಯಿಂದಾಗಿ ಹಾನಿಗೊಳಗಾಗಿರುವರಾಜ್ಯದ 130 ತಾಲ್ಲೂಕುಗಳನ್ನು ಅತಿವೃಷ್ಟಿ ಪೀಡಿತ ಎಂದು ಘೋಷಣೆ ಮಾಡಿ ಕೇಂದ್ರ ಸರ್ಕಾರಕ್ಕೆಪಟ್ಟಿ ಕಳುಹಿಸಿಕೊಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅತಿವೃಷ್ಟಿ ಪರಿಹಾರವಾಗಿ ₹ 395 ಕೋಟಿ ಬಿಡುಗಡೆ ಮಾಡಿದೆ.ಈ ಹಣ ಸಾಕಾಗುವುದಿಲ್ಲ.ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದರು.

ಕಲಬುರ್ಗಿ ಸೇರಿ ರಾಜ್ಯದ ಹಲವೆಡೆ ಮಳೆ ಮುಂದುವರಿದಿದೆ.ಹೀಗಾಗಿ ಮತ್ತೊಮ್ಮೆ ಬೆಳೆ ಹಾನಿ ಸರ್ವೆ ಮಾಡುವಂತೆ ಸೂಚಿಸುತ್ತೇನೆ ಎಂದೂ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.