ADVERTISEMENT

ಯುವತಿಗೆ ಚುಡಾಯಿಸಿದ ವ್ಯಾಪಾರಿ: ಗುಂಪು ಘರ್ಷಣೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2018, 19:58 IST
Last Updated 1 ಸೆಪ್ಟೆಂಬರ್ 2018, 19:58 IST
ಶಿವಮೊಗ್ಗದ ಗಾಂಧಿಬಜಾರ್‌ನಲ್ಲಿ ನಡೆದ ಗುಂಪು ಘರ್ಷಣೆ
ಶಿವಮೊಗ್ಗದ ಗಾಂಧಿಬಜಾರ್‌ನಲ್ಲಿ ನಡೆದ ಗುಂಪು ಘರ್ಷಣೆ   

ಶಿವಮೊಗ್ಗ: ಇಲ್ಲಿನ ಗಾಂಧಿಬಜಾರ್‌ನಲ್ಲಿ ಯುವತಿಯೊಬ್ಬಳನ್ನು ಚುಡಾಯಿಸಿದ ಪ್ರಕರಣ ಶನಿವಾರ ರಾತ್ರಿ ಎರಡು ಕೋಮುಗಳ ಮಧ್ಯೆ ಘರ್ಷಣೆಗೆ ಕಾರಣವಾಗಿದೆ.

ಬಿ.ಎಚ್. ರಸ್ತೆಗೆ ಹೊಂದಿಕೊಂಡಿರುವ ‘ಮಲ್ನಾಡ್‌ ಫುಟ್‌ವೇರ್‌’ ಮಳಿಗೆಯಲ್ಲಿ ಪಾದರಕ್ಷೆ ಖರೀದಿಸಲು ಬಂದಿದ್ದ ಯುವತಿ ಜೊತೆ ಅಂಗಡಿಯ ಹುಡುಗ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಈ ವಿಷಯ ತಿಳಿದ ಯುವತಿಯ ಪೋಷಕರು ಅಂಗಡಿ ಮಾಲೀಕನ ಜತೆ ವಾಗ್ವಾದ ನಡೆಸಿದ್ದಾರೆ.

ಅಷ್ಟರಲ್ಲಿ ಘಟನೆ ಕೋಮು ಸ್ವರೂಪ ಪಡೆದುಕೊಂಡು ಹೊಡೆದಾಟದ ಹಂತ ತಲುಪಿದೆ. ವಿಷಯ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಲಾಠಿ ಬೀಸಿ ಗುಂಪು ಚದುರಿಸಿದ್ದಾರೆ.

ADVERTISEMENT

ಈ ಸಮಯದಲ್ಲಿ ಕಲ್ಲುತೂರಾಟ ನಡೆದಿದೆ. ಇದರಿಂದ ಹಲವರಿಗೆ ಗಾಯಗಳಾಗಿದ್ದು, ಬಜರಂಗದಳದ ನಗರ ಸಂಚಾಲಕ ಮಾಲತೇಶ್‌ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಂಧಿಬಜಾರ್ ಎಂ.ಕೆ.ಕೆ. ರಸ್ತೆ, ಒ.ಟಿ. ರಸ್ತೆ ಸಂಚಾರ ಬಂದ್ ಮಾಡಿದ ಪೊಲೀಸರು, ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.