ADVERTISEMENT

ಉಡುಪಿ: ಆಂಬುಲೆನ್ಸ್‌–ಲಾರಿ ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2018, 5:56 IST
Last Updated 27 ಅಕ್ಟೋಬರ್ 2018, 5:56 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಉಡುಪಿ: ಬ್ರಹ್ಮಾವರ ಸಮೀಪದ ಕೋಟ ಮಾಣೂರು ಬಳಿ ಶುಕ್ರವಾರ ಮಧ್ಯರಾತ್ರಿ ಆಂಬುಲೆನ್ಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಆಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉಲ್ಲಾಸ್ ತಳೇಕರ್, ಅಶೋಕ್, ಶೈಲೇಶ್ ಮೃತರಾಗಿದ್ದು, ಎಲ್ಲರೂ ಕಾರವಾರದವರು ಎನ್ನಲಾಗಿದೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೃತ ಉಲ್ಲಾಸ್ ತಳೇಕರ್ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ನಿದ್ದೆಯ ಮಂಪರಿನಲ್ಲಿ ಅಪಘಾತ ಸಂಭವಿಸಿದ್ದು,ಆಂಬುಲೆನ್ಸ್‌ ಹೆದ್ದಾರಿಯ ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದಿದೆ.

ADVERTISEMENT

ಘಟನೆಯಲ್ಲಿ ಇತರಮೂವರಿಗೆ ಗಂಭೀರ ಗಾಯಗಳಾಗಿದ್ದು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.