ADVERTISEMENT

ರಸ್ತೆ ನಿರ್ಮಾಣ ಆಮಿಷ ಒಡ್ಡಿದ ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2018, 17:21 IST
Last Updated 23 ಅಕ್ಟೋಬರ್ 2018, 17:21 IST

ಸವಳಗಿ (ಬಾಗಲಕೋಟೆ): ‘ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆನಂದ ನ್ಯಾಮಗೌಡ ಅವರನ್ನು ಗೆಲ್ಲಿಸಿದರೆ ಜಮಖಂಡಿ– ಸಾವಳಗಿ ರಸ್ತೆಗೆ ಮೂರು ತಿಂಗಳೊಳಗೆ ಡಾಂಬರು ಹಾಕಿಸಿ ಕೊಡುವೆ’ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಆಮಿಷ ಒಡ್ಡಿದರು.

ತಾಲ್ಲೂಕಿನ ಸಾವಳಗಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ ವೇದಿಕೆಯಲ್ಲಿದ್ದ ಮುಖಂಡರು ಇದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಹೇಳಲು ಮುಂದಾದರೂ ಅವರ ಮಾತನ್ನು ಪರಮೇಶ್ವರ ಕೇಳಿಸಿಕೊಳ್ಳಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT