ಬೇಲೂರು(ಹಾಸನ): ರೋಹಿಣಿ ಸಿಂಧೂರಿ, ಡಿ. ರೂಪಾ ಪ್ರಕರಣದಲ್ಲಿ ಮುಖ್ಯ ಕಾರ್ಯದರ್ಶಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಲಿಖಿತ ಸೂಚನೆ ನೀಡಿದ್ದಾರೆ. ಇಬ್ಬರನ್ನೂ ಕರೆದು ಮಾತನಾಡಿದ್ದಾರೆ ಎಂದರು.
ನಾಗರಿಕ ಸೇವಾ ನಿಯಮಗಳ ಪಾಲನೆ ಮಾಡಬೇಕು. ಇಲ್ಲದಿದ್ದರೆ ಏನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ ಎಂದರು.
ಈ ವಿಷಯದಲ್ಲಿ ಯಾವುದೇ ವಿಳಂಬ ಆಗಿಲ್ಲ. ಸೂಕ್ತ ಕಾಲದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.