ADVERTISEMENT

ಆರ್.ಆರ್‌. ನಗರ ಉಪಚುನಾವಣೆ: ಹ್ಯಾಟ್ರಿಕ್‌ ಗೆಲುವಿನತ್ತ ಮುನಿರತ್ನ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 7:38 IST
Last Updated 10 ನವೆಂಬರ್ 2020, 7:38 IST
ಮುನಿರತ್ನ
ಮುನಿರತ್ನ   

ಬೆಂಗಳೂರು: ಒಟ್ಟು 25 ಸುತ್ತುಗಳಲ್ಲಿ ನಡೆಯಲಿರುವ ಆರ್‌.ಆರ್‌. ನಗರ ಕ್ಷೇತ್ರದ ಮತಗಳ ಎಣಿಕೆ ಪ್ರಗತಿಯಲ್ಲಿದ್ದು, 15ನೇ ಸುತ್ತಿನ ‌ಅಂತ್ಯಕ್ಕೆ ಬಿಜೆಪಿಯ ಮುನಿರತ್ನ ಅವರು 35,526 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಆ ಮೂಲಕ, ಅವರು ಹ್ಯಾಟ್ರಿಕ್‌ ಗೆಲುವಿನ ಕಡೆಗೆ ಮುನ್ನುಗ್ಗಿದ್ದಾರೆ.

ಕಾಂಗ್ರೆಸ್‌ನ ಕುಸುಮಾ ಅವರಿಗೆ 43,116 ಮತಗಳು ಬಂದರೆ, ಜೆಡಿಎಸ್‌ನ ಕೃಷ್ಣಮೂರ್ತಿ ಕೇವಲ 5638 ಮತಗಳನ್ನು ಮಾತ್ರ ಗಳಿಸಿದ್ದಾರೆ.

ಈವರೆಗೆ ಎಲ್ಲ ಸುತ್ತುಗಳಲ್ಲೂ ಮುನಿರತ್ನ ಅವರು ಮುನ್ನಡೆ ಸಾಧಿಸುತ್ತಲೇ. ಯಾವ ಸುತ್ತಿನಲ್ಲೂ ಕುಸುಮಾ ಪೈಪೋಟಿ ನೀಡಿಲ್ಲ. ಇನ್ನು ಕೇವಲ 10 ಸುತ್ತುಗಳ ಎಣಿಕೆ ಮಾತ್ರ ಬಾಕಿ ಉಳಿದಿದೆ.

ADVERTISEMENT

ಮತ ಎಣಿಕೆ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮಟ್ಟಿದೆ. ಮುನಿರತ್ನ ಪರ ಘೋಷಣೆ ಕೂಗುತ್ತಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.