ADVERTISEMENT

ಸಹಕಾರ ಮಾರಾಟ ಮಹಾಮಂಡಳಕ್ಕೆ ₹24.74 ಕೋಟಿ ಲಾಭ

ಶಿಕ್ಷಣ ನಿಧಿಗೆ ₹2ಕೋಟಿ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 21:31 IST
Last Updated 16 ಆಗಸ್ಟ್ 2022, 21:31 IST
ಬೆಂಗಳೂರಿನಲ್ಲಿ ಮಂಗಳವಾರ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ. ಟಿ. ದೇವೇಗೌಡ ಅವರಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಅವರು ₹2 ಕೋಟಿ ಮೊತ್ತದ ಶಿಕ್ಷಣ ನಿಧಿ ಚೆಕ್‌ ನೀಡಿದರು. ಸಹಕಾರ ಸಚಿವ ಎಸ್. ಟಿ ಸೋಮಶೇಖರ್‌, ಮಾರಾಟ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಆರ್. ಶ್ರೀಧರ್, ಉಪಾಧ್ಯಕ್ಷ ಬಸಗೌಡ ರಾಮಗೌಡ ಪಾಟೀಲ, ನಿರ್ದೇಶಕ ಡಿ.ಜಿ. ಶಾಂತನಗೌಡ ಇದ್ದರು.
ಬೆಂಗಳೂರಿನಲ್ಲಿ ಮಂಗಳವಾರ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ. ಟಿ. ದೇವೇಗೌಡ ಅವರಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಅವರು ₹2 ಕೋಟಿ ಮೊತ್ತದ ಶಿಕ್ಷಣ ನಿಧಿ ಚೆಕ್‌ ನೀಡಿದರು. ಸಹಕಾರ ಸಚಿವ ಎಸ್. ಟಿ ಸೋಮಶೇಖರ್‌, ಮಾರಾಟ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಆರ್. ಶ್ರೀಧರ್, ಉಪಾಧ್ಯಕ್ಷ ಬಸಗೌಡ ರಾಮಗೌಡ ಪಾಟೀಲ, ನಿರ್ದೇಶಕ ಡಿ.ಜಿ. ಶಾಂತನಗೌಡ ಇದ್ದರು.   

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳವು 2021–22ನೇ ಸಾಲಿನಲ್ಲಿ ₹24.74 ಕೋಟಿ ನಿವ್ವಳ ಲಾಭ ಗಳಿಸಿದೆ.

‘ಮಾರಾಟ ಮಹಾಮಂಡಳವುಒಟ್ಟು ₹1,679.21 ಕೋಟಿ ವಹಿವಾಟು ನಡೆಸಿ ಪ್ರಗತಿಯ ಹಾದಿಯಲ್ಲಿ ಸಾಗಿದೆ. ಮಂಡಳಿಯು ಪ್ರಸ್ತುತ ₹9.02 ಕೋಟಿ ಷೇರು ಬಂಡವಾಳ ಹೊಂದಿದೆ’ಎಂದು ಅಧ್ಯಕ್ಷ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಮಹಾಮಂಡಳವು ವಿವಿಧ ಯೋಜನೆಗಳನ್ನು ರೂಪಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದ 50 ಸ್ಥಳಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕ್ರಿಮಿನಾಶಕ, ಕೃಷಿ ಉತ್ಪನ್ನಗಳ ಮಾರಾಟಕ್ಕಾಗಿ ಮಳಿಗೆಗಳನ್ನು ತೆರೆಯಲು ಉದ್ದೇಶಿಸಿದೆ’ ಎಂದು ವಿವರಿಸಿದರು.

ADVERTISEMENT

‘ಮಹಾಮಂಡಳದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಸೌಲಭ್ಯ ಯೋಜನೆಯನ್ನು ಜಾರಿಗೊಳಿಸುವ ಚಿಂತನೆ ಇದೆ. ಜತೆಗೆ, ಜನರಿಕ್‌ ಔಷಧದ ಸಗಟು ಮತ್ತು ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಹಾಗೂ ಲಾಜಿಸ್ಟಿಕ್‌ ವೇರ್‌ಹೌಸ್‌ ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲಾಗುವುದು ಮತ್ತು ರೈತರಿಗೆ ಅನುಕೂಲ ಕಲ್ಪಿಸಲು ಇ–ಮಾರುಕಟ್ಟೆ ಘಟಕಗಳನ್ನು ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.

‘ಶಿಕ್ಷಣ ಮತ್ತು ತರಬೇತಿ ಕಾರ್ಯಗಳನ್ನು ಕೈಗೊಳ್ಳಲು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ₹2ಕೋಟಿ ಶಿಕ್ಷಣ ನಿಧಿ ನೀಡಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.