ADVERTISEMENT

ಆರ್‌ಎಸ್ಎಸ್: ಉಮಾಪತಿಗೆ ನೂತನ ಜವಾಬ್ದಾರಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2023, 23:30 IST
Last Updated 17 ಡಿಸೆಂಬರ್ 2023, 23:30 IST
<div class="paragraphs"><p>ಜಿ.ಎಸ್. ಉಮಾಪತಿ</p></div>

ಜಿ.ಎಸ್. ಉಮಾಪತಿ

   

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಕರ್ನಾಟಕ ದಕ್ಷಿಣ
ಪ್ರಾಂತದ ನೂತನ ಪ್ರಾಂತಸಂಘ ಚಾಲಕರಾಗಿ ಜಿ.ಎಸ್. ಉಮಾಪತಿ ಕಾರ್ಯನಿರ್ವಹಿಸಲಿದ್ದಾರೆ. 

ಉಮಾಪತಿ ಅವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಆಡನೂರು ಗ್ರಾಮದವರಾಗಿದ್ದಾರೆ. 
ಲೋಕೊಪಯೋಗಿ ಇಲಾಖೆಯಲ್ಲಿ ಅಧೀಕ್ಷಕ ಎಂಜಿನಿಯರ್ ಆಗಿ‌ ಸೇವೆ ಸಲ್ಲಿಸಿ, 2018ರಲ್ಲಿ ಅವರು ನಿವೃತ್ತರಾಗಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಆರ್‌ಎಸ್‌ಎಸ್‌ ಸ್ವಯಂಸೇವಕರಾಗಿದ್ದ ಅವರು, ಬಳಿಕ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ADVERTISEMENT

ಆರ್‌ಎಸ್‌ಎಸ್‌ ಬೆಂಗಳೂರು ಮಹಾನಗರದ ಸಂಘಚಾಲಕರಾಗಿ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗದ ಸಂಘಚಾಲಕರಾಗಿ ನಾರಾಯಣ ಶೆಣೈ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.