ADVERTISEMENT

ಹಿಂದಿ ಭಾಷೆಯ ಹೆಸರಲ್ಲಿ ಆರ್‌ಎಸ್‌ಎಸ್‌ನಿಂದ ಹಿಂದುತ್ವ ಹೇರಿಕೆ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಸೆಪ್ಟೆಂಬರ್ 2022, 6:35 IST
Last Updated 14 ಸೆಪ್ಟೆಂಬರ್ 2022, 6:35 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಹಿಂದಿಭಾಷೆಯ ಹೆಸರಲ್ಲಿ ಆರ್‌ಎಸ್‌ಎಸ್ ಹಿಂದುತ್ವ ಹೇರುವುದನ್ನು ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಬುಧವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ ಎಂದು ಉಲ್ಲೇಖಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಹಿಂದಿ ದಿವಸ ಆಚರಿಸಿ ಹಿಂದಿ ಭಾಷೆಯ ಹೆಸರಲ್ಲಿ ಆರ್‌ಎಸ್‌ಎಸ್ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್ ಕುತಂತ್ರ ಈ ನೆಲದಲ್ಲಿ ನಡೆಯುದಿಲ್ಲ: ಹರಿಪ್ರಸಾದ್
ನಾನು ಸದಾ ಭಾಷೆ ಕಲಿಯುವ ವಿದ್ಯಾರ್ಥಿ. ಆರು ಭಾಷೆ ಮಾತನಾಡುತ್ತೇನೆ. ಹಲವು ಭಾಷೆಗಳನ್ನ ಅರ್ಥ ಮಾಡಿಕೊಳ್ಳುತ್ತೇನೆ. ಹಿಂದಿ ಸೇರಿದಂತೆ ಎಲ್ಲ ಭಾಷೆಯ ಮೇಲೆ ಗೌರವ ಇದೆ. ಹಾಗೇ ಹಿಂದಿಹೇರಿಕೆಯ ವಿರುದ್ಧ ನನ್ನ ಧಿಕ್ಕಾರವಿದೆ. ಭಾಷೆ ಹೇರಿಕೆಯ ಹಿಂದಿನ ಆರ್‌ಎಸ್‌ಎಸ್‌ನ ಕುತಂತ್ರ, ಸಾವಿರಾರು ಭಾಷೆಗಳಿಗೆ ಜನ್ಮಕೊಟ್ಟ ಈ ನೆಲದಲ್ಲಿ ನಡೆಯುದಿಲ್ಲ ಎಂದು ವಿಧಾನ ಪರಿಷತ್ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.