ADVERTISEMENT

ನಾಳೆ ‘ಕೃಷ್ಣಪಥ‘

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 19:45 IST
Last Updated 2 ಜನವರಿ 2020, 19:45 IST
ಎಸ್.ಎಂ.ಕೃಷ್ಣ
ಎಸ್.ಎಂ.ಕೃಷ್ಣ   

ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ 50 ವಸಂತಗಳ ಸಾರ್ಥಕ ಸಂಸದೀಯ ಬದುಕಿನ ನೆನಪು, ಸಾಧನೆ–ಸಿದ್ಧಿಗಳ ಪರಿಚಯ ಹಾಗೂ ಆಕರ ಗ್ರಂಥಗಳ ಲೋಕಾರ್ಪಣೆ ಸಮಾರಂಭವನ್ನು ಜ.4ರಂದು (ಶನಿವಾರ) ಆಯೋಜಿಸಲಾಗಿದೆ.

ಸೆಂಟ್ರಲ್‌ ಕಾಲೇಜ್‌ ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ನಡೆಯುವ ಸಮಾರಂಭದ ಸಾನ್ನಿಧ್ಯವನ್ನು ಡಾ. ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ಮೈಸೂರಿನ ಮುಕ್ತಿದಾನಂದ ಮಹಾರಾಜ್‌ ಅವರು ಕೃಷ್ಣಪಥ ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಎಂ.ಎನ್‌. ವೆಂಕಟಾಚಲಯ್ಯ ಅವರು ‘ಸ್ಮೃತಿ ವಾಹಿನಿ’ ಜತೆ ಐದು ಗ್ರಂಥಗಳ ಲೋಕಾರ್ಪಣೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಮನು ಬಳಿಗಾರ ಅವರು ಗ್ರಂಥಗಳ ಪರಿಚಯ ಮಾಡಿಕೊಡಲಿದ್ದಾರೆ. ಕವಿ ಡಾ. ಸಿದ್ದಲಿಂಗಯ್ಯ ಅವರು ಅತಿಥಿಗಳಾಗಿರುತ್ತಾರೆ. ಎಸ್‌.ಎಂ. ಕೃಷ್ಣ, ಕೃಷ್ಣಪಥ ಸಮಿತಿಯ ಗೌರವ ಕಾರ್ಯದರ್ಶಿ ಬಿ.ಎಲ್‌. ಶಂಕರ್ ಮತ್ತು ಗ್ರಂಥಗಳ ಸಂಪಾದಕ ಡಾ. ಕೆ.ಆರ್‌. ಕಮಲೇಶ್‌ ವೇದಿಕೆಯಲ್ಲಿರುತ್ತಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.