ADVERTISEMENT

ನನ್ನ ರಾಜಕೀಯ ಜೀವನ ಮುಗಿದಿಲ್ಲ: ಸಂಸದ ಎಸ್.ಪಿ.ಮುದ್ದಹನುಮೇಗೌಡ 

​ಪ್ರಜಾವಾಣಿ ವಾರ್ತೆ
Published 21 ಮೇ 2019, 9:23 IST
Last Updated 21 ಮೇ 2019, 9:23 IST
ಎಸ್.ಪಿ.ಮುದ್ದಹನುಮೇಗೌಡ 
ಎಸ್.ಪಿ.ಮುದ್ದಹನುಮೇಗೌಡ    

ತುಮಕೂರು: ನನ್ನ ರಾಜಕೀಯ ಜೀವನ ಮುಗಿದಿಲ್ಲ. ಮುಂದಿನ ದಿನಗಳಲ್ಲಿ ನನ್ನ ರಾಜಕೀಯ ಚಟುವಟಿಕೆ ಮತ್ತಷ್ಟ ದೊಡ್ಡದಾಗಲಿದೆ ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನನ್ನ ಕಾಂಗ್ರೆಸ್ ಪಕ್ಷ ಮತ್ತು ನಾಯಕರು ಚೆನ್ನಾಗಿ ನಡೆಸಿಕೊಂಡಿದ್ದಾರೆ. ಈಗ ನಾನು ಹೆಚ್ಚು ರಾಜಕೀಯ ವಿಚಾರ ಮಾತನಾಡುವುದಿಲ್ಲ. ಮುಂದೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಕೆಲಸ ಮಾಡುವೆ ಎಂದರು.

ತುಮಕೂರು ಜಿಲ್ಲೆಯ ಜನರು ನನ್ನ ಮೇಲೆ ಈಗಲೂ ಹೆಚ್ಚಿನ ಪ್ರೀತಿ ಇಟ್ಟಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.