ADVERTISEMENT

ಸದಾಶಿವ ಆಯೋಗದ ವರದಿ ಇನ್ನೂ ಜಾರಿಯಾಗಿಲ್ಲ: ಬೊಮ್ಮಾಯಿ

ಬಂಜಾರರು ಪ್ರಚೋಚನೆಗೆ ಒಳಗಾಗದಿರಿ: ಮುಖ್ಯಮಂತ್ರಿ ಮನವಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 19:36 IST
Last Updated 27 ಮಾರ್ಚ್ 2023, 19:36 IST
ಬಸವರಾಜ ಬೊಮ್ಮಾಯಿ 
ಬಸವರಾಜ ಬೊಮ್ಮಾಯಿ    

ಚಿಕ್ಕಬಳ್ಳಾಪುರ: ‘ಸದಾಶಿವ ಆಯೋಗದ ವರದಿ ಇನ್ನೂ ಜಾರಿಯಾಗಿಲ್ಲ. ಭೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯಗಳು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುತ್ತವೆ. ಈ ಸಮುದಾಯಗಳನ್ನು ಎಸ್‌ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ. ಈ ಸಮುದಾಯಗಳನ್ನು ಎಸ್‌ಸಿ ಪಟ್ಟಿಯಲ್ಲಿ ಉಳಿಸಿಕೊಂಡೇ ಕೇಂದ್ರಕ್ಕೆ ಶಿಫಾರಸು ಮಾಡ ಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

‘ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ನೀಡುತ್ತಿರುವುದನ್ನು ಕಾಂಗ್ರೆಸ್‌ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಿಂಸೆಗೆ ಪ್ರಚೋದಿಸುತ್ತಿದ್ದಾರೆ.ರಾಜಕೀಯ ಲಾಭಕ್ಕಾಗಿ ಹಿಂಸೆಗೆ ಇಳಿಸುವುದು ಶೋಭೆ ತರುವುದಿಲ್ಲ’ ಎಂದು ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಂಜಾರ ಸಮುದಾಯವು ಯಾವುದೇ ರೀತಿಯ ಪ್ರಚೋದನೆಗೆ ಒಳಗಾಗ ಬಾರದು. ಯಾವುದೇ ವಿಷಯ ಇದ್ದರೂ ಕುಳಿತು ಪರಿಹರಿಸಿಕೊಳ್ಳೋಣ. ಹಿಂಸೆಗೆ ಅವಕಾಶ ಬೇಡ’ ಎಂದು ಮನವಿ ಮಾಡಿದರು.

ADVERTISEMENT

‘ಪರಿಶಿಷ್ಟ ಜಾತಿಗೆ ಶೇ 3ರಷ್ಟು ಬದಲು ಶೇ 4.5 ಮೀಸಲಾತಿ ಕೊಟ್ಟಿದ್ದೇವೆ. ತಾಂಡಾದ ಜನರಿಗೆ 2 ಲಕ್ಷ ಹಕ್ಕುಪತ್ರ ನೀಡಿದ್ದೇವೆ. ತಾಂಡಾ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ತಾಂಡಾಗಳಿಗೆ ಮೂಲ ಸೌಲಭ್ಯಗಳನ್ನು ಕೊಟ್ಟಿದ್ದು ಬಿ.ಎಸ್‌.ಯಡಿಯೂರಪ್ಪ. ಮೊದಲಿನಿಂದಲೂ ಬಿಜೆಪಿ ಬಂಜಾರ ಸಮುದಾಯದ ರಕ್ಷಣೆ ಮಾಡಿದೆ. ಮುಂದೆಯೂ ಮಾಡುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.