ಕಲಬುರ್ಗಿ: ‘ರಾಜ್ಯ ಸರ್ಕಾರವು ಅನುದಾನ ನೀಡುವುದಾಗಿ ಭರವಸೆ ನೀಡಿದರೆ ಮಾತ್ರ ಈ ವರ್ಷದ ಧಾರವಾಡ ಸಾಹಿತ್ಯ ಸಂಭ್ರಮವನ್ನು ಆಯೋಜಿಸುತ್ತೇವೆ’ ಎಂದು ಸಂಭ್ರಮದ ಸಂಘಟಕರಲ್ಲೊಬ್ಬರಾದ ಸಾಹಿತಿ ರಾಘವೇಂದ್ರ ಪಾಟೀಲ ಹೇಳಿದರು.
ಸೋಮವಾರ ನಗರಕ್ಕೆ ಭೇಟಿ ನೀಡಿದ್ದ ಅವರು ‘ಪ್ರಜಾವಾಣಿ’ ಯೊಂದಿಗೆ ಮಾತನಾಡಿ, ‘ಸರ್ಕಾರ ಪ್ರತಿವರ್ಷವೂ ₹ 15 ಲಕ್ಷ ಬಿಡುಗಡೆ ಮಾಡುತ್ತಿತ್ತು. ಈ ಬಾರಿ ಅನುದಾನ ನೀಡುವ ಬಗ್ಗೆ ಯಾವುದೇ ಭರವಸೆ ಸಿಕ್ಕಿಲ್ಲ. ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಸರ್ಕಾರ ಹಣ ಕೊಟ್ಟರೆ ಸಂಭ್ರಮ ನಡೆಯಲಿದೆ. ಇಲ್ಲದಿದ್ದರೆ ಇಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.