ADVERTISEMENT

ಸಂಪಾಜೆ ಘಾಟಿ ರಸ್ತೆ : 20 ದಿನದಲ್ಲಿ ಲಘು ವಾಹನ ಸಂಚಾರ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2018, 19:22 IST
Last Updated 2 ಸೆಪ್ಟೆಂಬರ್ 2018, 19:22 IST

ಸುಳ್ಯ: ಭಾರಿ ಮಳೆ, ಭೂಕುಸಿತದಿಂದ ಸಂಪೂರ್ಣ ನಾಶವಾಗಿರುವ ಸುಳ್ಯ–ಮಡಿಕೇರಿ ನಡುವಣ ಸಂಪಾಜೆ ಘಾಟಿ ರಸ್ತೆ ದುರಸ್ತಿಗೊಳಿಸುವ ಕಾರ್ಯ ಭರದಿಂದ ಸಾಗಿದ್ದು, 20 ದಿನಗಳಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ದೊರಕುವ ನಿರೀಕ್ಷೆ ಇದೆ.

‘ಜೋಡುಪಾಲ– ಮದೆನಾಡು– ಮೊಣ್ಣಂಗೇರಿ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ಸುಮಾರು 15 ಕಿ.ಮೀ. ರಸ್ತೆ ಸಂಪೂರ್ಣ ಹಾಳಾಗಿದೆ. ದುರಸ್ತಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಯಂತ್ರಗಳ ಸಹಾಯದಿಂದ ಮಾಡುತ್ತಿದೆ.

ಮಳೆ ಬಿಟ್ಟಿದ್ದು, ಇದೇ ವೇಗದಿಂದ ಕಾಮಗಾರಿ ನಡೆದರೆ 20 ದಿನಗಳಲ್ಲಿ ಲಘು ವಾಹನ ಸಂಚಾರ ಸಾಧ್ಯವಾಗ ಬಹುದು. ಭಾರಿ ವಾಹನಗಳ ಸಂಚಾರಕ್ಕೆ ಸಾಕಷ್ಟು ಸಮಯ ಬೇಕು’ ಎಂದು ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.