ADVERTISEMENT

ಗುರುಮಹಾಂತ ಸ್ವಾಮೀಜಿಗೆ ‘ಸಂಯಮ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 20:40 IST
Last Updated 11 ಡಿಸೆಂಬರ್ 2020, 20:40 IST
ಇಳಕಲ್‌ನ ಗುರುಮಹಾಂತ ಸ್ವಾಮೀಜಿ
ಇಳಕಲ್‌ನ ಗುರುಮಹಾಂತ ಸ್ವಾಮೀಜಿ   

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ‘ಜನರಲ್ಲಿ ದುಶ್ಚಟಗಳನ್ನು ಬಿಡಿಸಲು ಮೌನಕ್ರಾಂತಿ ಕೈಗೊಂಡಿರುವ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಚಿತ್ತರಗಿ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮೀಜಿ ಅವರನ್ನು ಪ್ರಸಕ್ತ ಸಾಲಿನ ‘ಸಂಯಮ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ’ ಎಂದು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹನುಮಂತ ಕೊಟಬಾಗಿ ತಿಳಿಸಿದರು.

ಇಲ್ಲಿನ ಕಲ್ಮಠದಲ್ಲಿ ಶುಕ್ರವಾರ ಮಾಹಿತಿ ನೀಡಿದ ಅವರು, ‘ಪ್ರಶಸ್ತಿ ₹ 1 ಲಕ್ಷ ನಗದು ಹಾಗೂ ಬೆಳ್ಳಿ ಪದಕ ಒಳಗೊಂಡಿದೆ. ಜನವರಿ ಮೊದಲ ವಾರದಲ್ಲಿ ಶ್ರೀಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಿತ್ತೂರು ಪಟ್ಟಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಹೇಳಿದರು.

‘ಶ್ರೀಮಠದ ಡಾ.ಮಹಾಂತ ಸ್ವಾಮೀಜಿ ಆರಂಭಿಸಿದ್ದ ಮಹಾಂತ ಜೋಳಿಗೆ ಅಂದೋಲನದಿಂದ ಲಕ್ಷಾಂತರ ಜನರು ದುಶ್ಚಟಗಳನ್ನು ತೊರೆದಿದ್ದಾರೆ. ಮದ್ಯದ ಬಾಟಲಿ, ಬೀಡಿ, ಸಿಗರೇಟ್, ಗುಟ್ಕಾ, ತಂಬಾಕು ಪೊಟ್ಟಣಗಳನ್ನು ಭಿಕ್ಷೆ ಬೇಡಿ ಅವರು ಜೋಳಿಗೆಗೆ ಹಾಕಿಸಿಕೊಳ್ಳುತ್ತಿದ್ದರು. ಇದೇ ಸಂಪ್ರದಾಯ ಮುಂದುವರಿಸಿರುವ ಗುರುಮಹಾಂತ ಸ್ವಾಮೀಜಿ, ಸಾವಿರಾರು ಜನರನ್ನು ದುಶ್ಚಟ ಮುಕ್ತರನ್ನಾಗಿಸಿದ್ದಾರೆ. ಸ್ವಾಮೀಜಿಯವರ ಈ ಸೇವೆ ಅನನ್ಯ’ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.