ಮೈಸೂರು: ದೇಶದಲ್ಲಿಯೇ ಮೊದಲು ಎನಿಸಿರುವ ಇಲ್ಲಿನಶ್ರೀಗಂಧ ಮ್ಯೂಸಿಯಂಗೆ ಸೋಮವಾರ (ಜ.25) ಚಾಲನೆ ಸಿಗಲಿದೆ.
ಅರಣ್ಯ ಇಲಾಖೆಯು, ನಗರದ ಅಶೋಕಪುರಂನಲ್ಲಿರುವ ಅರಣ್ಯ ಭವನದ ಶ್ರೀಗಂಧ ಕೋಠಿಯಲ್ಲಿ ಈ ಮ್ಯೂಸಿಯಂ ಸ್ಥಾಪಿಸಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದಾರೆ ಎಂದು ಉಪ ಅರಣ್ಯ
ಸಂರಕ್ಷಣಾಧಿಕಾರಿ ಕೆ.ಸಿ.ಪ್ರಶಾಂತಕುಮಾರ್ ತಿಳಿಸಿದರು.
ರೈತರು ಬೆಳೆದ ಶ್ರೀಗಂಧದ ಮರವನ್ನು ಮಾರಾಟ ಮಾಡಲು ಅನುಕೂಲ ಕಲ್ಪಿಸಲು ಹಾಗೂ ಶ್ರೀಗಂಧವನ್ನು ಹೊಸದಾಗಿ ಬೆಳೆಯಲು ಉದ್ದೇಶಿಸಿರುವ ರೈತರಿಗೆ ಬೆಳೆಯ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಮ್ಯೂಸಿಯಂ ಸ್ಥಾಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.