ಹೊಸಪೇಟೆ/ಸಂಡೂರು: ಸಂಡೂರು ಉಪ ವಲಯ ಅರಣ್ಯ ಅಧಿಕಾರಿ ಬಸವರಾಜ ವೀರಾಪುರ (31) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗಂಗಾವತಿ ತಾಲ್ಲೂಕಿನ ಜಮಾಪುರ ಗ್ರಾಮದ ಬಸವರಾಜ ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.
'ಭಾನುವಾರ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾರೆ. ಸೋಮವಾರ ಘಟನೆಗೆ ಬಗ್ಗೆ ಗೊತ್ತಾಗಿದೆ. ಆತ್ಮಹತ್ಯೆಗೆ ಇನ್ನಷ್ಟೇ ಕಾರಣ ತಿಳಿಯಬೇಕಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.