ADVERTISEMENT

ಪುಣ್ಯಸ್ನಾನ: ಆರು ಸಾವು

​ಪ್ರಜಾವಾಣಿ ವಾರ್ತೆ
Published 15 ಜನವರಿ 2019, 19:21 IST
Last Updated 15 ಜನವರಿ 2019, 19:21 IST

ಸಿಂಧನೂರು (ರಾಯಚೂರು ಜಿಲ್ಲೆ): ಸಂಕ್ರಾಂತಿ ಅಂಗವಾಗಿ ಪುಣ್ಯಸ್ನಾನಕ್ಕೆ ತೆರಳಿದ್ದವರು ಮೃತಪಟ್ಟಿದ್ದಾರೆ.

ನಟರಾಜ ಕಾಲೊನಿಯ ಬಸವರಾಜ ಶಂಕ್ರಗೌಡ ಪಾಟೀಲ (17) ಮತ್ತು ನವೀನ ಸಂಗಪ್ಪ (15) ಬುಧವಾರ ವಳಬಳ್ಳಾರಿ ಬಳಿಯ ನದಿಯಲ್ಲಿ ಮುಳುಗಿದ್ದಾರೆ.

ತಾಲ್ಲೂಕಿನ ರಾಗಲಪರ್ವಿ ಗ್ರಾಮದ ಭರತ್‌ಗೌಡ (24) ಕೊಪ್ಪಳ ಜಿಲ್ಲೆಯ ಆನೆಗುಂದಿಯಲ್ಲಿ ತುಂಗಾಭದ್ರಾ ನದಿಯಲ್ಲಿ ಮುಳುಗಿ ಸತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಬಾಗಲಕೋಟೆ/ಗದಗ: ಬಾಗಲಕೋಟೆ ಜಿಲ್ಲೆಯ ಚಿಕ್ಕಸಂಗಮದ ಕೃಷ್ಣೆಯ ಹಿನ್ನೀರಿನಲ್ಲಿ ಇಬ್ಬರು ಬಾಲಕರು, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಬಳಿ ಕಾಳಿ ನದಿಯಲ್ಲಿ ಒಬ್ಬ ಯುವಕ ಮಂಗಳವಾರ ಸಂಕ್ರಾಂತಿ ಪುಣ್ಯಸ್ನಾನಕ್ಕೆ ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.