ಮಂಗಳೂರು: ‘ಕಲಾಪ ವರದಿಗೆ ಕೇವಲ ದೂರದರ್ಶನಕ್ಕೆ ಅವಕಾಶ ಕೊಟ್ಟಿರುವುದು ಸರಿಯಲ್ಲ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮವನ್ನೂ ಕೂಡ ಸಂವಿಧಾನದ ಒಂದು ಅಂಗ ಎಂದು ತಿಳಿದುಕೊಳ್ಳಬೇಕು. ಸರ್ಕಾರಿ ಸಂಸ್ಥೆಗಳ ಜತೆಗೆ ಖಾಸಗಿ ವಾಹಿನಿಗಳಿಗೂ ಕಲಾಪ ವರದಿ ಮಾಡಲು ಅವಕಾಶ ಮಾಡಿಕೊಡಬೇಕು’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.
ನಗರದ ಡಾ. ಟಿ.ಎಂ.ಎ.ಪೈ ಹಾಲ್ನಲ್ಲಿ ಶನಿವಾರ ಆರಂಭಗೊಂಡ ನಾಲ್ಕು ದಿನಗಳ ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ ಉದ್ಘಾಟನಾ ಸಮಾರಂಭದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
‘ಮಾಹಿತಿ ಸ್ವಾತಂತ್ರ್ಯ ಸಾಂವಿಧಾನಿಕ ಹಕ್ಕು. ಹಾಗಾಗಿ, ವಿಧಾನಸಭೆಯ ಕಲಾಪವನ್ನು ವರದಿ ಮಾಡುವುದಕ್ಕೆ ಖಾಸಗಿ ವಾಹಿನಿಗಳಿಗೆ ಸರ್ಕಾರ ನಿರ್ಬಂಧ ಹೇರಿರುವುದು ಸರಿಯಾದ ಕ್ರಮವಲ್ಲ’ ಎಂದು ಅವರು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.