ADVERTISEMENT

ಸ್ಯಾಂಟ್ರೊ ರವಿ ಪ್ರಕರಣ: ಸಿಐಡಿ ಪೊಲೀಸರಿಂದ ತನಿಖೆ –ಆರಗ ಜ್ಞಾನೇಂದ್ರ 

​ಪ್ರಜಾವಾಣಿ ವಾರ್ತೆ
Published 16 ಜನವರಿ 2023, 7:24 IST
Last Updated 16 ಜನವರಿ 2023, 7:24 IST
ಸ್ಯಾಂಟ್ರೊ ರವಿ ಮತ್ತು ಸಹಚರರನ್ನು ಕರೆತರುತ್ತಿರುವ ಪೊಲೀಸರು
ಸ್ಯಾಂಟ್ರೊ ರವಿ ಮತ್ತು ಸಹಚರರನ್ನು ಕರೆತರುತ್ತಿರುವ ಪೊಲೀಸರು   

ಬೆಂಗಳೂರು: ಪರಿಶಿಷ್ಟ ಮಹಿಳೆ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಗೂಂಡಾಗಿರಿ ಆರೋಪದ ಮೇರೆಗೆ ಪೊಲೀಸರು ಗುಜರಾತ್‌ನಲ್ಲಿ ಬಂಧಿಸಿದ್ದ ಕೆ.ಎಸ್‌. ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ಸಿಐಡಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸ್ಯಾಂಟ್ರೊ ರವಿ ವಿರುದ್ಧದ ಎಲ್ಲ ದಾಖಲೆಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದರು. ಬಂಧಿತ ಸ್ಯಾಂಟ್ರೊ ರವಿ ಮತ್ತು ಸಹವರ್ತಿಗಳಿಗೆ ಮೈಸೂರು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT