ADVERTISEMENT

‘ಸ್ಯಾಂಟ್ರೊ ರವಿ ವಿದೇಶಕ್ಕೆ ಪರಾರಿ ಯತ್ನ’: ಎಚ್‌.ಡಿ. ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2023, 13:45 IST
Last Updated 13 ಜನವರಿ 2023, 13:45 IST
   

ಕಲಬುರಗಿ: ‘ಮಹಿಳೆಗೆ ಮೋಸ ಮಾಡಿ ಪರಾರಿಯಾಗಿರುವ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿ ಗುಜರಾತ್ ಮೂಲಕ ವಿದೇಶಕ್ಕೆ ಪರಾರಿಯಾಗಲು ಯೋಜನೆ ರೂಪಿಸಿರಬೇಕು‘ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದರು.

ಸ್ಯಾಂಟ್ರೊ ರವಿ ಬಂಧನ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದ ಗಡಿ ದಾಟಲು ಅವನಿಗೆ ಹೇಗೆ ಸಾಧ್ಯವಾಯಿತು. ಯಾರು ಬಿಟ್ಟರು? ಈ ಸಂದರ್ಭದಲ್ಲಿ ಹಾಗೆ ಹೋಗಲು ಸಾಧ್ಯವೇ? ಬಹುಶಃ ಸ್ಯಾಂಟ್ರೊ ರವಿಯನ್ನು ರಕ್ಷಿಸಲು ಗೃಹಸಚಿವರೇ ಆತನೊಂದಿಗೆ ತೆರಳಿರಬೇಕು’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT